Talaatala (Kannada)
Kannada

About The Book

ಮುರಿದ ಕಡಲಿನೊಳಗೆ ಈಜಲಾಗದ ಸಂಕಟ ಕಾದಂಬರಿ ಮಾಧ್ಯಮವು ಸಾಹಿತ್ಯಕ್ಕೆ ಪ್ರವೇಶ ಪಡೆದ ತಕ್ಷಣ ಏನು ಜನಪ್ರಿಯತೆ ಪಡೆಯಿತೋ ಅದನ್ನು ಈ ಗಳಿಗೆಯ ತನಕ ಮತ್ತೊಂದು ವಿಧದ ಬರವಣಿಗೆ ಪಡೆಯಲಿಲ್ಲ. ಇದು ಎಲ್ಲಾ ದೇಶಕಾಲಕ್ಕೂ ಸಲ್ಲುವ ಬರಹಲೋಕದ ವಿದ್ಯಮಾನ. ಬಹುಶಃ ನಮ್ಮ ಮನಸ್ಸುಗಳೊಳಗಿರುವ ವಿಸ್ತಾರವಾದ ಕಥೆಯ ಅಪೇಕ್ಷೆ ಇದಕ್ಕೆ ಕಾರಣವಾಗಿದ್ದಂತೆ ಸಾಹಿತ್ಯದಲ್ಲಿ ಯಾವ ಜಟಿಲತೆಯನ್ನೂ ಬಯಸದೆ ಸರಾಗ ಮನರಂಜನಾತ್ಮಕ ಓದನ್ನು ಮಾತ್ರ ಅಪೇಕ್ಷಿಸುವ ಒಂದು ಓದುಗ ಸಮೂಹವೂ ಕಾರಣ. ಈ ಕಾರಣದಿಂದಲೆ ಇರಬಹುದು ಜಗತ್ತಿನ ಬಹುತೇಕ ಭಾಷೆಗಳಲ್ಲಿ ವರ್ಷವರ್ಷವೂ ಹೊರಬರುವ ವಿಪುಲ ಸಂಖ್ಯೆಯ ಕಾದಂಬರಿಗಳು ವಸ್ತುವಿನ ಆಳವನ್ನು] ಕೆದಕದೆ ತೇಲಿಸಿಕೊಂಡು ಹೋಗುವ ಗುಣವನ್ನು ಅರಿತೋ ಅರಿಯದೆಯೋ ಲಕ್ಷಣವನ್ನಾಗಿಸಿಕೊಂಡುಬಿಟ್ಟಿವೆ. ಈ ಲಕ್ಷಣವನ್ನೂ] ಒಡೆಯುವ ಕಾಲ ಕಳೆದೆರಡು ದಶಕದಿಂದ ಜಗತ್ತಿನೆಲ್ಲೆಡೆ ಆರಂಭವಾಗಿದೆ. ಭಾರತದ ಭಾಷೆಗಳಲ್ಲೂ ಕೂಡ ಮಧ್ಯಮವರ್ಗದ ಕೌಟುಂಬಿಕ ಭಿತ್ತಿಯನ್ನೇ ಆಧರಿಸಿದ್ದ ಕಾದಂಬರಿಗಳು]] ಕ್ರಮಕ್ರಮೇಣ ಹಿನ್ನೆಲೆಗೆ ಸರಿಯುತ್ತಿವೆ. ಅಲ್ಲಿ ವಸ್ತುವೊಂದರ ಸಮಗ್ರ ಅಧ್ಯಯನದ ಫಲವಾಗಿ ಹೊರಹೊಮ್ಮುವ ಗಂಭೀರ ವಿಚಾರಗಳು ಮುಖ್ಯರಂಗಕ್ಕೆ ಬರುತ್ತಿವೆ. ಸಮಕಾಲೀನ ಐತಿಹಾಸಿಕ ಅಥವಾ ಪೌರಾಣಿಕ ಈ ಯಾವ ವಸ್ತುವನ್ನೆತ್ತಿಕೊಂಡರೂ ಅಲ್ಲಿ ಭಾವುಕತೆ ಅತಿರಂಜಕತೆ ಭಾಷಾ ವೈಭವಗಳು ಪ್ರಧಾನವಾಗದೆ ವಿಚಾರಗಳ ಕುರಿತು ಸಮಗ್ರ ದೃಷ್ಟಿಕೋನವೊಂದು ನಾಯಕ ನಾಯಕಿಯರನ್ನು ಪಕ್ಕಕ್ಕೆ ಸರಿಸುವಷ್ಟು ಪ್ರಬಲವಾಗುತ್ತಿದೆ. ಇದಕ್ಕೆ ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳ ಕಾದಂಬರಿಗಳನ್ನು ಉದಾಹರಿಸಬಹುದು. ಪ್ರಸ್ತುತ ಕಾದಂಬರಿ ''ಮುರಿದ ಕಡಲು'' ಕೂಡ ಈ ಉದಾಹರಣೆಗಳಲ್ಲಿ ಸೇರುತ್ತದೆ. ಮನೋಜ್ ರೂಪ್ಡಾ ಅವರ ಈ ಕಾದಂಬರಿಯು ತರೆದಿಡುವ ಲೋಕ ಬಹುಕಾಲ] ನಮ್ಮ ಮನಸ್ಸನ್ನು ಅಶಾಂತಗೊಳಿಸುತ್ತದೆ. ಗಾಢ ದುಃಖವೊಂದು ಆವರಿಸಿ ಒಲ್ಲೆ ಎಂಬುವವರನ್ನೂ ಬಿಡದೆ ವಿಚಾರದಾಳಕ್ಕೆ ಎಳೆಯುತ್ತದೆ. ಮುರಿದ ದೋಣಿಯನ್ನು ಹೇಗೋ ದುರಸ್ತಿ ಮಾಡಬಹುದು. ಕಡಲೇ ಮುರಿದರೆ? ಚಂದ್ರಶೇಖರ ಮದಭಾವಿಯವರ ಕನ್ನಡ ಅನುವಾದವು ಎಲ್ಲಿಯೂ ತೊಡಕಿಗೆ ಸಿಕ್ಕಿಹಾಕಿಕೊಳ್ಳದೆ ಮೂಲ ಕಾದಂಬರಿಕಾರರ ''ದನಿ''ಯನ್ನು ಕಿಂಚಿ
Piracy-free
Piracy-free
Assured Quality
Assured Quality
Secure Transactions
Secure Transactions
Delivery Options
Please enter pincode to check delivery time.
*COD & Shipping Charges may apply on certain items.
Review final details at checkout.
downArrow

Details


LOOKING TO PLACE A BULK ORDER?CLICK HERE